ಬೆಂಗಳೂರು, ವೈಟ್ ಫಿಲ್ದ್ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.
ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್ ಫೀಲ್ದ್ ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.
ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು..
“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.
ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ – ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…