90 ವರ್ಷದ ತಾತನಿಗೆ ಹೊಸ ಜೀವ- ರೋಬೋಟಿಕ್ ಶಸ್ತ್ರಚಿಕಿತ್ಸೆ ತಂದ ಹೊಸ ಆಶಾಕಿರಣ

ಬೆಂಗಳೂರು, ವೈಟ್‌ ಫಿಲ್ದ್‌ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.

ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್‌ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.

ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು..

“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.

ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ – ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.

Ramesh Babu

Journalist

Recent Posts

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

43 minutes ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

12 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

2 days ago