‘ನಗರಸಭಾ ಸದಸ್ಯರು, ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದ ನಗರದ ನಿವಾಸಿ ಗಿರೀಶ್: ‘ಆಯೋಗ್ಯ’ ಶಬ್ಧಕ್ಕೆ ಕೆರಳಿದ ನಗರಸಭೆ ಸದಸ್ಯರು: ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ

‘ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಮಾತಿಗೆ ಕೆರಳಿದ ಸದಸ್ಯರು ಹಾಗೂ ಸಭೆಯಲ್ಲಿ ಹಾಜರಿದ್ದ ಕೆಲ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಗುರುವಾರ ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಡೆಯಿತು.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎನ್ನುವ ವಿಷಯ ಮಾತನಾಡುವ ವೇಳೆ ಗಿರೀಶ್ ‘ಅಯೋಗ್ಯರು’ ಶಬ್ದ ಬಳಕೆ ಮಾಡಿದರು.

ಇದರಿಂದ ಕುಪಿಗೊಂಡ ಸದಸ್ಯ ಟಿ.ಎನ್.ಪ್ರಭುದೇವ್, ನಗರದಲ್ಲಿನ ಸುಮಾರು ಒಂದು ಲಕ್ಷ ಜನರ ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿರುವ ಸದಸ್ಯರನ್ನು ಅಯೋಗ್ಯರೆಂದು ನಿಂಧಿಸಿದರೆ ಅದು ಇಡೀ ನಗರದ ಜನರನ್ನು ನಿಂಧಿಸಿದಂತೆ. ನಾವುಗಳು ಸಹ ಹೋರಾಟದ ಹಿನ್ನೆಲೆಯಿಂದಲೇ ಇಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದೇವೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡುವ ಸಲುವಾಗಿಯೇ ಸಭೆ ನಡೆಸಲಾಗುತ್ತಿದೆ. ಆದರೆ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜವಾಬ್ದಾರಿ ಅರಿತು ಮಾತನಾಡಬೇಕು. ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

‘ಅಯೋಗ್ಯರು’ ಶಬ್ಧ  ಸಭೆಯಲ್ಲಿ  ಕೋಲಾಹಲವನ್ನೇ ಉಂಟುಮಾಡಿತ್ತು. ಆದರೆ ಗಿರೀಶ್ ಮಾತ್ರ ತಾವು ಬಳಸಿದ್ದ ಅಯೋಗ್ಯರು ಶಬ್ದ ಬಳಕೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಭೆಯಿಂದ ಹೊರನಡೆದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

4 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

17 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

18 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

20 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

22 hours ago