‘ನಗರಸಭಾ ಸದಸ್ಯರು, ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದ ನಗರದ ನಿವಾಸಿ ಗಿರೀಶ್: ‘ಆಯೋಗ್ಯ’ ಶಬ್ಧಕ್ಕೆ ಕೆರಳಿದ ನಗರಸಭೆ ಸದಸ್ಯರು: ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ

‘ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಮಾತಿಗೆ ಕೆರಳಿದ ಸದಸ್ಯರು ಹಾಗೂ ಸಭೆಯಲ್ಲಿ ಹಾಜರಿದ್ದ ಕೆಲ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಗುರುವಾರ ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಡೆಯಿತು.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎನ್ನುವ ವಿಷಯ ಮಾತನಾಡುವ ವೇಳೆ ಗಿರೀಶ್ ‘ಅಯೋಗ್ಯರು’ ಶಬ್ದ ಬಳಕೆ ಮಾಡಿದರು.

ಇದರಿಂದ ಕುಪಿಗೊಂಡ ಸದಸ್ಯ ಟಿ.ಎನ್.ಪ್ರಭುದೇವ್, ನಗರದಲ್ಲಿನ ಸುಮಾರು ಒಂದು ಲಕ್ಷ ಜನರ ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿರುವ ಸದಸ್ಯರನ್ನು ಅಯೋಗ್ಯರೆಂದು ನಿಂಧಿಸಿದರೆ ಅದು ಇಡೀ ನಗರದ ಜನರನ್ನು ನಿಂಧಿಸಿದಂತೆ. ನಾವುಗಳು ಸಹ ಹೋರಾಟದ ಹಿನ್ನೆಲೆಯಿಂದಲೇ ಇಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದೇವೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡುವ ಸಲುವಾಗಿಯೇ ಸಭೆ ನಡೆಸಲಾಗುತ್ತಿದೆ. ಆದರೆ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜವಾಬ್ದಾರಿ ಅರಿತು ಮಾತನಾಡಬೇಕು. ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

‘ಅಯೋಗ್ಯರು’ ಶಬ್ಧ  ಸಭೆಯಲ್ಲಿ  ಕೋಲಾಹಲವನ್ನೇ ಉಂಟುಮಾಡಿತ್ತು. ಆದರೆ ಗಿರೀಶ್ ಮಾತ್ರ ತಾವು ಬಳಸಿದ್ದ ಅಯೋಗ್ಯರು ಶಬ್ದ ಬಳಕೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಭೆಯಿಂದ ಹೊರನಡೆದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

11 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago