‘ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಮಾತಿಗೆ ಕೆರಳಿದ ಸದಸ್ಯರು ಹಾಗೂ ಸಭೆಯಲ್ಲಿ ಹಾಜರಿದ್ದ ಕೆಲ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಗುರುವಾರ ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಡೆಯಿತು.
ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎನ್ನುವ ವಿಷಯ ಮಾತನಾಡುವ ವೇಳೆ ಗಿರೀಶ್ ‘ಅಯೋಗ್ಯರು’ ಶಬ್ದ ಬಳಕೆ ಮಾಡಿದರು.
‘ಅಯೋಗ್ಯರು’ ಶಬ್ಧ ಸಭೆಯಲ್ಲಿ ಕೋಲಾಹಲವನ್ನೇ ಉಂಟುಮಾಡಿತ್ತು. ಆದರೆ ಗಿರೀಶ್ ಮಾತ್ರ ತಾವು ಬಳಸಿದ್ದ ಅಯೋಗ್ಯರು ಶಬ್ದ ಬಳಕೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಭೆಯಿಂದ ಹೊರನಡೆದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…