‘ನಗರಸಭಾ ಸದಸ್ಯರು, ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದ ನಗರದ ನಿವಾಸಿ ಗಿರೀಶ್: ‘ಆಯೋಗ್ಯ’ ಶಬ್ಧಕ್ಕೆ ಕೆರಳಿದ ನಗರಸಭೆ ಸದಸ್ಯರು: ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ

‘ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಮಾತಿಗೆ ಕೆರಳಿದ ಸದಸ್ಯರು ಹಾಗೂ ಸಭೆಯಲ್ಲಿ ಹಾಜರಿದ್ದ ಕೆಲ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಗುರುವಾರ ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಡೆಯಿತು.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎನ್ನುವ ವಿಷಯ ಮಾತನಾಡುವ ವೇಳೆ ಗಿರೀಶ್ ‘ಅಯೋಗ್ಯರು’ ಶಬ್ದ ಬಳಕೆ ಮಾಡಿದರು.

ಇದರಿಂದ ಕುಪಿಗೊಂಡ ಸದಸ್ಯ ಟಿ.ಎನ್.ಪ್ರಭುದೇವ್, ನಗರದಲ್ಲಿನ ಸುಮಾರು ಒಂದು ಲಕ್ಷ ಜನರ ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿರುವ ಸದಸ್ಯರನ್ನು ಅಯೋಗ್ಯರೆಂದು ನಿಂಧಿಸಿದರೆ ಅದು ಇಡೀ ನಗರದ ಜನರನ್ನು ನಿಂಧಿಸಿದಂತೆ. ನಾವುಗಳು ಸಹ ಹೋರಾಟದ ಹಿನ್ನೆಲೆಯಿಂದಲೇ ಇಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದೇವೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡುವ ಸಲುವಾಗಿಯೇ ಸಭೆ ನಡೆಸಲಾಗುತ್ತಿದೆ. ಆದರೆ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜವಾಬ್ದಾರಿ ಅರಿತು ಮಾತನಾಡಬೇಕು. ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

‘ಅಯೋಗ್ಯರು’ ಶಬ್ಧ  ಸಭೆಯಲ್ಲಿ  ಕೋಲಾಹಲವನ್ನೇ ಉಂಟುಮಾಡಿತ್ತು. ಆದರೆ ಗಿರೀಶ್ ಮಾತ್ರ ತಾವು ಬಳಸಿದ್ದ ಅಯೋಗ್ಯರು ಶಬ್ದ ಬಳಕೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಭೆಯಿಂದ ಹೊರನಡೆದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

12 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

12 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

12 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

13 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

15 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

19 hours ago