‘ನಗರಸಭಾ ಸದಸ್ಯರು, ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದ ನಗರದ ನಿವಾಸಿ ಗಿರೀಶ್: ‘ಆಯೋಗ್ಯ’ ಶಬ್ಧಕ್ಕೆ ಕೆರಳಿದ ನಗರಸಭೆ ಸದಸ್ಯರು: ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ

‘ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಮಾತಿಗೆ ಕೆರಳಿದ ಸದಸ್ಯರು ಹಾಗೂ ಸಭೆಯಲ್ಲಿ ಹಾಜರಿದ್ದ ಕೆಲ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಗುರುವಾರ ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಡೆಯಿತು.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎನ್ನುವ ವಿಷಯ ಮಾತನಾಡುವ ವೇಳೆ ಗಿರೀಶ್ ‘ಅಯೋಗ್ಯರು’ ಶಬ್ದ ಬಳಕೆ ಮಾಡಿದರು.

ಇದರಿಂದ ಕುಪಿಗೊಂಡ ಸದಸ್ಯ ಟಿ.ಎನ್.ಪ್ರಭುದೇವ್, ನಗರದಲ್ಲಿನ ಸುಮಾರು ಒಂದು ಲಕ್ಷ ಜನರ ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿರುವ ಸದಸ್ಯರನ್ನು ಅಯೋಗ್ಯರೆಂದು ನಿಂಧಿಸಿದರೆ ಅದು ಇಡೀ ನಗರದ ಜನರನ್ನು ನಿಂಧಿಸಿದಂತೆ. ನಾವುಗಳು ಸಹ ಹೋರಾಟದ ಹಿನ್ನೆಲೆಯಿಂದಲೇ ಇಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದೇವೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡುವ ಸಲುವಾಗಿಯೇ ಸಭೆ ನಡೆಸಲಾಗುತ್ತಿದೆ. ಆದರೆ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜವಾಬ್ದಾರಿ ಅರಿತು ಮಾತನಾಡಬೇಕು. ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

‘ಅಯೋಗ್ಯರು’ ಶಬ್ಧ  ಸಭೆಯಲ್ಲಿ  ಕೋಲಾಹಲವನ್ನೇ ಉಂಟುಮಾಡಿತ್ತು. ಆದರೆ ಗಿರೀಶ್ ಮಾತ್ರ ತಾವು ಬಳಸಿದ್ದ ಅಯೋಗ್ಯರು ಶಬ್ದ ಬಳಕೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಭೆಯಿಂದ ಹೊರನಡೆದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

32 minutes ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

8 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago