Categories: ವೈರಲ್

93 ವರ್ಷದ ವೃದ್ಧ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ವೈರಲ್‌: ಅಂಗಡಿ ಮಾಲೀಕ ಏನು ಮಾಡಿದ…?

93 ವರ್ಷದ ವೃದ್ಧನೊಬ್ಬ ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ಒಂದು ವೈರಲ್‌ ಆಗಿದೆ. ಇವರ ಕರುಣಾಜನಕ ಪ್ರೀತಿಗೆ ಮನಸೋತ ಅಂಗಡಿಯಾತ ಕೇವಲ 20 ರೂ. ಪಡೆದು ಮಂಗಳಸೂತ್ರ ಕೊಟ್ಟು ಕಳಿಸಿದ್ದಾನೆ.

ಅಂಗಡಿಯಾತನ ಹೃದಯ ವೈಶಾಲ್ಯತೆಗೆ ಕರಗಿಹೋದ ವೃದ್ಧ, ದಂಪತಿ ಕಣ್ಣೀರು ಹಾಕಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದರು, ಅವರ ಪೈಕಿ ಒಬ್ಬ ಮೃತಪಟ್ಟಿದ್ದು , ಮತ್ತೊಬ್ಬ ಕುಡಿತದ ದಾಸನಾಗಿದ್ದಾನೆ ಎಂದು ದಂಪತಿ ಹೇಳಿಕೊಂಡಿದ್ದಾರೆ.

ಸದ್ಯದ ಚಿನ್ನದ ಬೆಲೆಯ ಅರಿವಿಲ್ಲದೆ ಅಂಗಡಿ ಬಾಗಿಲು ಹತ್ತಿದ ಈ ದಂಪತಿ ತಮ್ಮ ಕೈಚೀಲದಿಂದ 1200 ರೂ. ತೆಗೆದಿದ್ದಾರೆ. ಇಷ್ಟು ಹಣ ಸಾಲದು ಎಂದು ಅಂಗಡಿಯಾತ ಹೇಳಿದಾಗ ವೃದ್ಧ ತನ್ನ ಜೇಬಿನಿಂದ ಚಿಲ್ಲರೆ ನಾಣ್ಯಗಳನ್ನು ಹೊರತೆಗೆದಿದ್ದಾನೆ. ಈ ದೃಶ್ಯ ಕಂಡು ಅಂಗಡಿಯಾತ ಕರಗಿ ನೀರಾಗಿದ್ದಾನೆ.

ಬಳಿಕ ಇಬ್ಬರ ಹಣವನ್ನೂ ಅವರಿಗೆ ವಾಪಸ್‌ ಕೊಟ್ಟು. ತಾಳಿಯನ್ನೂ ಕೊಟ್ಟು ನೀವು ಪಾಂಡುರಂಗ ರುಕ್ಮಿಣಿ ಇದ್ದಂತೆ.. ಕೇವಲ ಹತ್ತು ರೂಪಾಯಿ ಕೊಡಿ ಎಂದು ಹೇಳಿ ಆಶೀರ್ವಾದ ಪಡೆದು ಕಳಿಸಿದ್ದಾನೆ. ಅಂಗಡಿಯಾತನ ವರ್ತನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Share
Published by
Ramesh Babu

Recent Posts

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

1 hour ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

12 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

15 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

17 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

17 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

24 hours ago