93 ವರ್ಷದ ವೃದ್ಧನೊಬ್ಬ ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ಒಂದು ವೈರಲ್ ಆಗಿದೆ. ಇವರ ಕರುಣಾಜನಕ ಪ್ರೀತಿಗೆ ಮನಸೋತ ಅಂಗಡಿಯಾತ ಕೇವಲ 20 ರೂ. ಪಡೆದು ಮಂಗಳಸೂತ್ರ ಕೊಟ್ಟು ಕಳಿಸಿದ್ದಾನೆ.
ಅಂಗಡಿಯಾತನ ಹೃದಯ ವೈಶಾಲ್ಯತೆಗೆ ಕರಗಿಹೋದ ವೃದ್ಧ, ದಂಪತಿ ಕಣ್ಣೀರು ಹಾಕಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದರು, ಅವರ ಪೈಕಿ ಒಬ್ಬ ಮೃತಪಟ್ಟಿದ್ದು , ಮತ್ತೊಬ್ಬ ಕುಡಿತದ ದಾಸನಾಗಿದ್ದಾನೆ ಎಂದು ದಂಪತಿ ಹೇಳಿಕೊಂಡಿದ್ದಾರೆ.
ಸದ್ಯದ ಚಿನ್ನದ ಬೆಲೆಯ ಅರಿವಿಲ್ಲದೆ ಅಂಗಡಿ ಬಾಗಿಲು ಹತ್ತಿದ ಈ ದಂಪತಿ ತಮ್ಮ ಕೈಚೀಲದಿಂದ 1200 ರೂ. ತೆಗೆದಿದ್ದಾರೆ. ಇಷ್ಟು ಹಣ ಸಾಲದು ಎಂದು ಅಂಗಡಿಯಾತ ಹೇಳಿದಾಗ ವೃದ್ಧ ತನ್ನ ಜೇಬಿನಿಂದ ಚಿಲ್ಲರೆ ನಾಣ್ಯಗಳನ್ನು ಹೊರತೆಗೆದಿದ್ದಾನೆ. ಈ ದೃಶ್ಯ ಕಂಡು ಅಂಗಡಿಯಾತ ಕರಗಿ ನೀರಾಗಿದ್ದಾನೆ.
ಬಳಿಕ ಇಬ್ಬರ ಹಣವನ್ನೂ ಅವರಿಗೆ ವಾಪಸ್ ಕೊಟ್ಟು. ತಾಳಿಯನ್ನೂ ಕೊಟ್ಟು ನೀವು ಪಾಂಡುರಂಗ ರುಕ್ಮಿಣಿ ಇದ್ದಂತೆ.. ಕೇವಲ ಹತ್ತು ರೂಪಾಯಿ ಕೊಡಿ ಎಂದು ಹೇಳಿ ಆಶೀರ್ವಾದ ಪಡೆದು ಕಳಿಸಿದ್ದಾನೆ. ಅಂಗಡಿಯಾತನ ವರ್ತನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…