93 ವರ್ಷದ ವೃದ್ಧನೊಬ್ಬ ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ಒಂದು ವೈರಲ್ ಆಗಿದೆ. ಇವರ ಕರುಣಾಜನಕ ಪ್ರೀತಿಗೆ ಮನಸೋತ ಅಂಗಡಿಯಾತ ಕೇವಲ 20 ರೂ. ಪಡೆದು ಮಂಗಳಸೂತ್ರ ಕೊಟ್ಟು ಕಳಿಸಿದ್ದಾನೆ.
ಅಂಗಡಿಯಾತನ ಹೃದಯ ವೈಶಾಲ್ಯತೆಗೆ ಕರಗಿಹೋದ ವೃದ್ಧ, ದಂಪತಿ ಕಣ್ಣೀರು ಹಾಕಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದರು, ಅವರ ಪೈಕಿ ಒಬ್ಬ ಮೃತಪಟ್ಟಿದ್ದು , ಮತ್ತೊಬ್ಬ ಕುಡಿತದ ದಾಸನಾಗಿದ್ದಾನೆ ಎಂದು ದಂಪತಿ ಹೇಳಿಕೊಂಡಿದ್ದಾರೆ.
ಸದ್ಯದ ಚಿನ್ನದ ಬೆಲೆಯ ಅರಿವಿಲ್ಲದೆ ಅಂಗಡಿ ಬಾಗಿಲು ಹತ್ತಿದ ಈ ದಂಪತಿ ತಮ್ಮ ಕೈಚೀಲದಿಂದ 1200 ರೂ. ತೆಗೆದಿದ್ದಾರೆ. ಇಷ್ಟು ಹಣ ಸಾಲದು ಎಂದು ಅಂಗಡಿಯಾತ ಹೇಳಿದಾಗ ವೃದ್ಧ ತನ್ನ ಜೇಬಿನಿಂದ ಚಿಲ್ಲರೆ ನಾಣ್ಯಗಳನ್ನು ಹೊರತೆಗೆದಿದ್ದಾನೆ. ಈ ದೃಶ್ಯ ಕಂಡು ಅಂಗಡಿಯಾತ ಕರಗಿ ನೀರಾಗಿದ್ದಾನೆ.
ಬಳಿಕ ಇಬ್ಬರ ಹಣವನ್ನೂ ಅವರಿಗೆ ವಾಪಸ್ ಕೊಟ್ಟು. ತಾಳಿಯನ್ನೂ ಕೊಟ್ಟು ನೀವು ಪಾಂಡುರಂಗ ರುಕ್ಮಿಣಿ ಇದ್ದಂತೆ.. ಕೇವಲ ಹತ್ತು ರೂಪಾಯಿ ಕೊಡಿ ಎಂದು ಹೇಳಿ ಆಶೀರ್ವಾದ ಪಡೆದು ಕಳಿಸಿದ್ದಾನೆ. ಅಂಗಡಿಯಾತನ ವರ್ತನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…