93 ವರ್ಷದ ವೃದ್ಧನೊಬ್ಬ ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ಒಂದು ವೈರಲ್ ಆಗಿದೆ. ಇವರ ಕರುಣಾಜನಕ ಪ್ರೀತಿಗೆ ಮನಸೋತ ಅಂಗಡಿಯಾತ ಕೇವಲ 20 ರೂ. ಪಡೆದು ಮಂಗಳಸೂತ್ರ ಕೊಟ್ಟು ಕಳಿಸಿದ್ದಾನೆ.
ಅಂಗಡಿಯಾತನ ಹೃದಯ ವೈಶಾಲ್ಯತೆಗೆ ಕರಗಿಹೋದ ವೃದ್ಧ, ದಂಪತಿ ಕಣ್ಣೀರು ಹಾಕಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದರು, ಅವರ ಪೈಕಿ ಒಬ್ಬ ಮೃತಪಟ್ಟಿದ್ದು , ಮತ್ತೊಬ್ಬ ಕುಡಿತದ ದಾಸನಾಗಿದ್ದಾನೆ ಎಂದು ದಂಪತಿ ಹೇಳಿಕೊಂಡಿದ್ದಾರೆ.
ಸದ್ಯದ ಚಿನ್ನದ ಬೆಲೆಯ ಅರಿವಿಲ್ಲದೆ ಅಂಗಡಿ ಬಾಗಿಲು ಹತ್ತಿದ ಈ ದಂಪತಿ ತಮ್ಮ ಕೈಚೀಲದಿಂದ 1200 ರೂ. ತೆಗೆದಿದ್ದಾರೆ. ಇಷ್ಟು ಹಣ ಸಾಲದು ಎಂದು ಅಂಗಡಿಯಾತ ಹೇಳಿದಾಗ ವೃದ್ಧ ತನ್ನ ಜೇಬಿನಿಂದ ಚಿಲ್ಲರೆ ನಾಣ್ಯಗಳನ್ನು ಹೊರತೆಗೆದಿದ್ದಾನೆ. ಈ ದೃಶ್ಯ ಕಂಡು ಅಂಗಡಿಯಾತ ಕರಗಿ ನೀರಾಗಿದ್ದಾನೆ.
ಬಳಿಕ ಇಬ್ಬರ ಹಣವನ್ನೂ ಅವರಿಗೆ ವಾಪಸ್ ಕೊಟ್ಟು. ತಾಳಿಯನ್ನೂ ಕೊಟ್ಟು ನೀವು ಪಾಂಡುರಂಗ ರುಕ್ಮಿಣಿ ಇದ್ದಂತೆ.. ಕೇವಲ ಹತ್ತು ರೂಪಾಯಿ ಕೊಡಿ ಎಂದು ಹೇಳಿ ಆಶೀರ್ವಾದ ಪಡೆದು ಕಳಿಸಿದ್ದಾನೆ. ಅಂಗಡಿಯಾತನ ವರ್ತನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…