Categories: ವೈರಲ್

93 ವರ್ಷದ ವೃದ್ಧ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ವೈರಲ್‌: ಅಂಗಡಿ ಮಾಲೀಕ ಏನು ಮಾಡಿದ…?

93 ವರ್ಷದ ವೃದ್ಧನೊಬ್ಬ ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ಒಂದು ವೈರಲ್‌ ಆಗಿದೆ. ಇವರ ಕರುಣಾಜನಕ ಪ್ರೀತಿಗೆ ಮನಸೋತ ಅಂಗಡಿಯಾತ ಕೇವಲ 20 ರೂ. ಪಡೆದು ಮಂಗಳಸೂತ್ರ ಕೊಟ್ಟು ಕಳಿಸಿದ್ದಾನೆ.

ಅಂಗಡಿಯಾತನ ಹೃದಯ ವೈಶಾಲ್ಯತೆಗೆ ಕರಗಿಹೋದ ವೃದ್ಧ, ದಂಪತಿ ಕಣ್ಣೀರು ಹಾಕಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದರು, ಅವರ ಪೈಕಿ ಒಬ್ಬ ಮೃತಪಟ್ಟಿದ್ದು , ಮತ್ತೊಬ್ಬ ಕುಡಿತದ ದಾಸನಾಗಿದ್ದಾನೆ ಎಂದು ದಂಪತಿ ಹೇಳಿಕೊಂಡಿದ್ದಾರೆ.

ಸದ್ಯದ ಚಿನ್ನದ ಬೆಲೆಯ ಅರಿವಿಲ್ಲದೆ ಅಂಗಡಿ ಬಾಗಿಲು ಹತ್ತಿದ ಈ ದಂಪತಿ ತಮ್ಮ ಕೈಚೀಲದಿಂದ 1200 ರೂ. ತೆಗೆದಿದ್ದಾರೆ. ಇಷ್ಟು ಹಣ ಸಾಲದು ಎಂದು ಅಂಗಡಿಯಾತ ಹೇಳಿದಾಗ ವೃದ್ಧ ತನ್ನ ಜೇಬಿನಿಂದ ಚಿಲ್ಲರೆ ನಾಣ್ಯಗಳನ್ನು ಹೊರತೆಗೆದಿದ್ದಾನೆ. ಈ ದೃಶ್ಯ ಕಂಡು ಅಂಗಡಿಯಾತ ಕರಗಿ ನೀರಾಗಿದ್ದಾನೆ.

ಬಳಿಕ ಇಬ್ಬರ ಹಣವನ್ನೂ ಅವರಿಗೆ ವಾಪಸ್‌ ಕೊಟ್ಟು. ತಾಳಿಯನ್ನೂ ಕೊಟ್ಟು ನೀವು ಪಾಂಡುರಂಗ ರುಕ್ಮಿಣಿ ಇದ್ದಂತೆ.. ಕೇವಲ ಹತ್ತು ರೂಪಾಯಿ ಕೊಡಿ ಎಂದು ಹೇಳಿ ಆಶೀರ್ವಾದ ಪಡೆದು ಕಳಿಸಿದ್ದಾನೆ. ಅಂಗಡಿಯಾತನ ವರ್ತನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

4 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

24 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

2 days ago