93 ವರ್ಷದ ವೃದ್ಧನೊಬ್ಬ ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಚಿನ್ನದಂಗಡಿಗೆ ಚಿಲ್ಲರೆ ಕಾಸು ತಂದ ವಿಡಿಯೋ ಒಂದು ವೈರಲ್ ಆಗಿದೆ. ಇವರ ಕರುಣಾಜನಕ ಪ್ರೀತಿಗೆ ಮನಸೋತ ಅಂಗಡಿಯಾತ ಕೇವಲ 20 ರೂ. ಪಡೆದು ಮಂಗಳಸೂತ್ರ ಕೊಟ್ಟು ಕಳಿಸಿದ್ದಾನೆ.
ಅಂಗಡಿಯಾತನ ಹೃದಯ ವೈಶಾಲ್ಯತೆಗೆ ಕರಗಿಹೋದ ವೃದ್ಧ, ದಂಪತಿ ಕಣ್ಣೀರು ಹಾಕಿದ್ದಾರೆ. ನಮಗೆ ಇಬ್ಬರು ಗಂಡು ಮಕ್ಕಳಿದ್ದರು, ಅವರ ಪೈಕಿ ಒಬ್ಬ ಮೃತಪಟ್ಟಿದ್ದು , ಮತ್ತೊಬ್ಬ ಕುಡಿತದ ದಾಸನಾಗಿದ್ದಾನೆ ಎಂದು ದಂಪತಿ ಹೇಳಿಕೊಂಡಿದ್ದಾರೆ.
ಸದ್ಯದ ಚಿನ್ನದ ಬೆಲೆಯ ಅರಿವಿಲ್ಲದೆ ಅಂಗಡಿ ಬಾಗಿಲು ಹತ್ತಿದ ಈ ದಂಪತಿ ತಮ್ಮ ಕೈಚೀಲದಿಂದ 1200 ರೂ. ತೆಗೆದಿದ್ದಾರೆ. ಇಷ್ಟು ಹಣ ಸಾಲದು ಎಂದು ಅಂಗಡಿಯಾತ ಹೇಳಿದಾಗ ವೃದ್ಧ ತನ್ನ ಜೇಬಿನಿಂದ ಚಿಲ್ಲರೆ ನಾಣ್ಯಗಳನ್ನು ಹೊರತೆಗೆದಿದ್ದಾನೆ. ಈ ದೃಶ್ಯ ಕಂಡು ಅಂಗಡಿಯಾತ ಕರಗಿ ನೀರಾಗಿದ್ದಾನೆ.
ಬಳಿಕ ಇಬ್ಬರ ಹಣವನ್ನೂ ಅವರಿಗೆ ವಾಪಸ್ ಕೊಟ್ಟು. ತಾಳಿಯನ್ನೂ ಕೊಟ್ಟು ನೀವು ಪಾಂಡುರಂಗ ರುಕ್ಮಿಣಿ ಇದ್ದಂತೆ.. ಕೇವಲ ಹತ್ತು ರೂಪಾಯಿ ಕೊಡಿ ಎಂದು ಹೇಳಿ ಆಶೀರ್ವಾದ ಪಡೆದು ಕಳಿಸಿದ್ದಾನೆ. ಅಂಗಡಿಯಾತನ ವರ್ತನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…