ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರದಲ್ಲಿ ಇತ್ತೀಚೆಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ, ನಿನ್ನೆ ಶಾಂತಿನಗರದಲ್ಲಿ 5 ಜನರಿಗೆ, ರೋಜಿಪುರದಲ್ಲಿ 10 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ , ಕಳೆದ ತಿಂಗಳು 800 ಜನರಿಗೆ ನಾಯಿ ಕಚ್ಟಿದ ಪ್ರಕರಣಗಳು ಪತ್ತೆಯಾಗಿದೆ, ಬೀದಿನಾಯಿಗಳ ಉಪಟಳದಿಂದ ಜನರು ಕಂಗಲಾಗಿದ್ದಾರೆ, ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದ್ದ ನಗರಸಭೆ ಅಧಿಕಾರಿಗಳು ಕೈಕಟ್ಟಿ ಕುಳಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೀದಿ ನಾಯಿಗಳನ್ನ ಹಿಡಿಯಲು ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲಾಗಿದೆ, ಆದರೆ ನಾಯಿ ಹಿಡಿಯುವ ಕೆಲಸ ಮಾತ್ರ ಪ್ರಾರಂಭವಾಗದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.