ಜ.7ರಂದು 5ನೇ ವರ್ಷದ ಶ್ರೀ ಸಿದ್ದಲಿಂಗೇಶ್ವರ ಜಯಂತೋತ್ಸವ

ಜ.7ರ ಭಾನುವಾರದಂದು ವಿವಿಧ ಮಠಗಳ ಮಠಾಧೀಶರನ್ನು ಒಳಗೊಂಡಂತೆ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಗರದ ಶ್ರೀ ಕ್ಷೇತ್ರ ದೊಡ್ಡ ಮಠದ 5ನೇ ವರ್ಷದ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವವನ್ನ ಅಯೋಜನೆ ಮಾಡಲಾಗಿದೆ ಎಂದು ದೊಡ್ಡ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ತಿಳಿಸಿದರು.

ನಗರದ ದೊಡ್ಡಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಪ್ರತಿಮೆಯನ್ನು ಮೆರವಣಿಗೆಯ ಮುಖಾಂತರ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದಲ್ಲಿರುವ ಶ್ರೀ ಕ್ಷೇತ್ರ ದೊಡ್ಡ ಮಠಕ್ಕೆ ಆಗಮಿಸಲಿದೆ. ದೊಡ್ಡಮಠದ ಮರುಳ ಶಂಕರೇಶ್ವರ ಗದ್ದುಗೆ ದೇವಾಲಯಕ್ಕೆ ಬರಮಾಡಿಕೊಂಡು ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದರು.

ನಂತರ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜ್ಞಾನ ದಾಸೋಹ, ನೋಟ್ ಬುಕ್ ವಿತರಣೆ, ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮಹಾಲಿಂಗ್ಯ, ಮುತ್ತಣ್ಣ, ಮೃತ್ಯುಂಜಯ, ಮಂಜುನಾಥ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *