ಹಗಲು ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಜಗೋಪಾಲ್ ನಗರದ ಪೊಲೀಸರು ಬಂಧಿಸಿದ್ದು, ಅರೊಪಿಗಳಿಂದ 7.05 ಲಕ್ಷ ಮೌಲ್ಯದ 121 ಗ್ರಾಂ ಚಿನ್ನದ ಆಭರಣಗಳು, 1 ಲಕ್ಷ ನಗದು ಮತ್ತು ಅಪರಾಧದ ಸಮಯದಲ್ಲಿ ಬಳಸಿದ ಕಬ್ಬಿಣದ ರಾಡ್ ನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.
ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಾಲಾಗಿದ್ಧ ಅಪಹರಣ ಮತ್ತು ಹಣ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 7 ಲಕ್ಷ ನಗದು ಹಣ, ಕೃತ್ಯಕ್ಕೆ ಬಳಿಸಿದ ಒಂದು ಆಟೋ ರಿಕ್ಷಾ, 2-ಮೊಬೈಲ್ ಫೋನ್, 1-ಚಾಕುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ನೈಜೀರಿಯಾದ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ನ ವಿರುದ್ಧ 2023ರ ನವೆಂಬರ್ ನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸಿ 7 ಬ್ಯಾಂಕ್ ಖಾತೆಗಳನ್ನು ಹಾಗೂ ಅಕ್ರಮವಾಗಿ ಮಾದಕವಸ್ತು ವ್ಯಾಪಾರದ ಮೂಲಕ ಸಂಗ್ರಹಿಸಿದ ಒಟ್ಟು 12,60,282 ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.