ಸರ್ಕಾರಿ ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿಂದು ನಡೆದಿದೆ.
ಶಿವಕೋಟೆ ಗ್ರಾಮ್ ಸರ್ವೇ ನಂ. 10/7 ಮತ್ತು 8ರಲ್ಲಿ ಬಂಡಿದಾರಿ ತೆರವಿಗೆ ಪೊಲೀಸ್ ನೆರವುನೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಸರ್ಕಾರಿ ಜಾಗ ಒತ್ತುವರಿದಾರರಿಂದ ವಿರೋಧ ವ್ಯಕ್ತವಾಗಿದೆ. ಅಧಿಕಾರಿಗಳ ಕಾರ್ಯಕ್ಕೆ ಒತ್ತುವರಿದಾರರು ಗಲಾಟೆ ನಡೆಸಿ ಜೆಸಿಬಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಕೃತ್ಯ ಎಸಿಗಿದವರನ್ನ ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಜೆಸಿಬಿ. ಸದ್ಯ ಅಧಿಕಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಕಂದಾಯ ಇಲಾಖೆಯಿಂದ ರಸ್ತೆ ಒತ್ತುವರಿ ತೆರವು ಕಾಮಗಾರಿ ವೇಳೆ ಅಡ್ಡಿಪಡಿಸಿದ ಒತ್ತುವರಿದಾರರು. ನಂತರ ಜೆಸಿಬಿಗೆ ಬೆಂಕಿ ಹಚ್ಚಿದ್ದಾರೆ. ನಾವು ಇದಕ್ಕೆ ಬೆದರುವುದಿಲ್ಲ. ನಮ್ಮ ಸಂಕಲ್ಪ ದೃಢವಾಗಿದೆ. ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.