ಕೋಲಾರ: ಪೋಷಕರು ತಮ್ಮ ಮಕ್ಕಳಲ್ಲಿ ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಪ್ರಾರಂಭಿಕ ಹಂತದಲ್ಲಿನ ಇಂತಹ ಪ್ಲೇ ಹೋಂ ಶಾಲೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಸಾಯಿ ಬಾಬಾ ಮಂದಿರದಲ್ಲಿ ಶನಿವಾರ ಅಕ್ಷರ ಪ್ಲೇ ಹೋಂ ಶಾಲೆಯ ಎರಡನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣದ ಮೂಲ ಆಶಯಗಳನ್ನು ಆಟಪಾಠಗಳೊಂದಿಗೆ ಇಂತಹ ಶಾಲೆಗಳು ಕಲಿಸಿಕೊಡುತ್ತವೆ ಪೋಷಕರು ತಮ್ಮ ಕೆಲಸಗಳ ಒತ್ತಡದ ಮಧ್ಯೆ ಶಾಲೆಗೆ ಸೇರಿಸಿದರೆ ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಮಹತ್ವ, ಅರಿವು ಹಾಗೂ ಮುಂದಿನ ಭವಿಷ್ಯದ ಕಣ್ಣೋಟ ತಿಳಿಸಲು ಸಾಧ್ಯವಾಗುತ್ತದೆ ಎಂದರು.
ಇವತ್ತು ಸಮಾಜದಲ್ಲಿ ಬರೀ ಹಣ ಸಂಪಾದನೆಗೆ ಎನ್ನುವ ಪ್ರವೃತ್ತಿ ದೂರವಾಗಿ ಒಳ್ಳೆಯ ಮೌಲ್ಯಯುತವಾದ ಶಿಕ್ಷಣ ಅವಶ್ಯಕತೆಯ ಬಗ್ಗೆ ಯೋಚಿಸಬೇಕಾಗಿದೆ ಮಕ್ಕಳಿಗೆ ದೇಶ, ಧರ್ಮ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಕಾಳಜಿ ತರಬೇಕಾಗಿದೆ ಉತ್ತಮ ಪ್ರಜೆಯಾಂತೆ ಪ್ರತಿಯೊಬ್ಬರೂ ಭಾರತದಲ್ಲಿ ಇದ್ದೇವೆ ಎಂಬುದನ್ನು ಅರಿತು ಬದುಕನ್ನು ರೂಪಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ್ ಹಂಸ ಮರೀಯಾ ಮಾತನಾಡಿ ಇಂತಹ ಶಾಲೆಗಳಿಂದ ಮಕ್ಕಳಿಗೆ ಮೊದಲು ಆಟ ನಂತರ ಪಾಠ ಎನ್ನುವ ಮನಸ್ಥಿತಿ ಬರುತ್ತದೆ ತಂದೆ ತಾಯಿಗೆ ಮಕ್ಕಳ ಚಿಂತೆ ದೂರವಾಗುತ್ತದೆ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಕಲಿಸುವಂತೆ ಶಿಕ್ಷಣದ ಪ್ರಾರಂಭದಲ್ಲೇ ಸಾಧ್ಯವಾದರೆ ಮುಂದೆ ಉತ್ತಮ ಮಕ್ಕಳಾಗಿ ಬೆಳೆಯಲು ಕೂಡ ಸಾಧ್ಯವಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಶಿಕ್ಷಕಿ ಪುಷ್ಪ ಓಂಶಕ್ತಿ ಚಲಪತಿ, ಅಕ್ಷರ ಪ್ಲೇ ಹೋಂ ಶಾಲೆಯ ಪ್ರಾಂಶುಪಾಲರಾದ ಶ್ರೀಲತಾ , ವಕೀಲ ರಘು, ಶಾಲೆಯ ಸುಭದ್ರಮ್ಮ, ಭರತ್ ಮುಂತಾದವರು ಇದ್ದರು