ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಡಿ ಉಪ್ಪಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇವರೊಂದಿಗೆ ಉಪಾಧ್ಯಕ್ಷರನ್ನಾಗಿ ಕೊತ್ತೂರಪ್ಪ, ಜೆ.ಮುನಿರಾಜು, ಎಂ. ಮುನಿಸ್ವಾಮಿ ಆಯ್ಕೆಗೊಂಡರೆ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಪ್ಪ, ಕಾರ್ಯದರ್ಶಿ ಪುರುಷೋತ್ತಮ ಗೌಡ, ಪುರುಷೋತ್ತಮ್ ಟಿ.ವಿ., ಸೈಯದ್ ಅಬ್ದುಲ್ ರೆಹಮಾನ್, ಕೃಷ್ಣಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎ. ಉಮೇಶ್, ಎಂ.ಮುನಿಯಪ್ಲ, ಪ್ರದೀಪ್, ಗಂಗಾಧರ್, ಶ್ರೀನಿವಾಸ್ ತರಿದಾಳ್, ಗಂಗರಾಜು ಅವರನ್ನು ಆಯ್ಕೆ ಮಾಡಲಾಯಿತು.
ಈ ವೇಳೆ ನೂತನ ಆಡಳಿಯ ಮಂಡಳಿಗೆ ನಿಕಟ ಪೂರ್ವ ಅಧ್ಯಕ್ಷ ಗಂಗರಾಜ್ ಶಿರವಾರ ಅವರು ನೂತನ ಅಧ್ಯಕ್ಷ ಚಂದ್ರಶೇಖರ್ ಡಿ ಉಪ್ಪಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳಿಗೆ ಹೂಗುಚ್ಛ ನೀಡುವ ಮೂಲಕ ಅಭಿನಂದಿಸಲಾಯಿತು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ಮುರಳಿ ಮೋಹನ್, ಗೌರವ ಅಧ್ಯಕ್ಷ ಷಫಿ, ನಿರ್ದೇಶಕರಾದ ಜಿಕೆ ಸುಗ್ಗರಾಜು, ಆನಂದ್ ವೈ, ದೇವರಾಜ್, ರಾಘವೇಂದ್ರ ಚಾರ್, ಸತೀಶ್, ದಿನ್ನೋರ್ ಮಂಜುನಾಥ್, ರಮೇಶ್ ಬೀದಿ ಮನೆ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಶ್ರೀಕಾಂತ್ ಮತ್ತಿತರರಿದ್ದರು.