ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯ ಪ್ರಧಾನಿಯಾಗಿ ಕೆಲಸ ಆರಂಭ: ಕಿಸಾನ್ ಸಮ್ಮಾನ್ ಯೋಜನೆಯಡಿ 9.3 ಕೋಟಿ ರೈತರಿಗೆ ಒಟ್ಟು 20,000 ಕೋಟಿ ರೂಪಾಯಿ ಮೊತ್ತದ ಹಣ ಬಿಡುಗಡೆ ಮಾಡುವ ಕಡತಕ್ಕೆ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಕೆಲಸ ಪ್ರಾರಂಭಿಸಿದ್ದಾರೆ. ನಿನ್ನೆಯಷ್ಟೇ(ಜೂ.09) ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಗೆ ಆಗಮಿಸಿ‌ ಮೊಟ್ಟಮೊದಲಿಗೆ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ರೈತರ ಖಾತೆಗೆ ಒಟ್ಟು 20,000 ಕೋಟಿ ರೂಪಾಯಿ ಜಮೆ ಮಾಡಲಾಗಿದೆ. ಕಿಸಾನ್ ನಿಧಿ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ.

ರೈತರಿಗೆ ಸಹಾಯ ಮಾಡುವ ಈ ಯೋಜನೆಯ 16 ಕಂತುಗಳಲ್ಲಿ ಇದುವರೆಗೆ 12 ಕೋಟಿ 33 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಡಿಬಿಟಿ ಮೂಲಕ ನೇರವಾಗಿ ವಿತರಿಸಲಾಗಿದೆ.

ಕಡತಕ್ಕೆ ಸಹಿ ಹಾಕಿದ ನಂತರ ಪ್ರಧಾನಿ ಮೋದಿ ಮಾತನಾಡಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *