ಆಂಬ್ಯುಲೆನ್ಸ್ ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪ: ಹಲ್ಲೆ ಆರೋಪಿತರನ್ನ ಬಂಧಿಸಿದ ಪೊಲೀಸರು

ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತರು.

ನಿನ್ನೆ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ  ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ರೋಗಿಯನ್ನ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯಲೆನ್ಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು.

ಆಂಬ್ಯುಲೆನ್ಸ್ ನ್ನು ಅತಿ ವೇಗವಾಗಿ ಚಾಲನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಐದಾರು ಕಿಲೋ ಮೀಟರ್ ಚೇಸ್ ಮಾಡಿ, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಚಾಲಕನಿಗೆ ಹಲ್ಲೆ ನಡೆಸಲಾಗಿದೆ.

ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆ ಮಾಡಿದವರನ್ನ ತಡೆದು ಆಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಪೊಲೀಸರು ಕಳಿಸಿದರು.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

Leave a Reply

Your email address will not be published. Required fields are marked *