ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ಕರವೇ ಆಶಯ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ತಿಳಿಸಿದ್ದಾರೆ.
ರಾಜ್ಯದ ಕಂಪನಿಗಳು ಕೈಗಾರಿಕಾಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯ ಗೊಳಿಸಬೇಕೆಂಬ ಕರವೇ ಹೋರಾಟಕ್ಕೆ ಜಯ ಸಿಕ್ಕಿದೆ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕುರಿತು ಸಚಿವ ಸಂಪುಟದಲ್ಲಿ ಅನುಮತಿ ನೀಡಿದ್ದು ಸ್ವಾಗತಾರ್ಹ ವಿಷಯವಾಗಿದೆ ಎಂದು ಕರವೇ ರಾಜ್ಯಧ್ಯಕ್ಷ ಟಿ.ಎ ನಾರಾಯಣ ಗೌಡ ತಿಳಿಸಿದ್ದಾರೆ .
ಜುಲೈ 1 ರಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡರ ನೇತೃತ್ವದ ಹೋರಾಟದ ಪ್ರತಿಫಲವೇ ಸರ್ಕಾರದ ಇಂದಿನ ನಿರ್ಧಾರಕ್ಕೆ ಕಾರಣ ಎಂದರು.
ಸರ್ಕಾರದ ಈ ನಿರ್ಧಾರವು ಕನ್ನಡಿಗರ ಹಿತ ಕಾಪಾಡಿದಂತಾಗಿದೆ. ನಮ್ಮ ರಾಜ್ಯದ ಜನರು ಉದ್ಯೋಗಕ್ಕೆ ಬೇರೆ ರಾಜ್ಯಕ್ಕೆ ವಲಸೆ ಹೊಗುವ ಪರಿಸ್ಥಿತಿ ಎದುರಾಗಿದ್ದು, ಕನ್ನಡಿಗರಿಗೆ ಇದೊಂದು ಮಹತ್ವದ ತೀರ್ಮಾನವಾಗಿದೆ ಎಂದು ತಿಳಿಸಿದ್ದಾರೆ.