ಆನೇಕಲ್ ನಲ್ಲಿ ಮತ್ತೆ  ಪೊಲೀಸ್ ಗನ್ ಸದ್ದು: ರೌಡಿ ಶೀಟರ್ ವೆಂಕಟರಾಜು ಕಾಲಿಗೆ ಗುಂಡು ಹಾರಿಸಿ ಬಂಧನ

ಆನೇಕಲ್ ನಲ್ಲಿ ಮತ್ತೆ  ಪೊಲೀಸ್ ಗನ್ ಸದ್ದು ಮಾಡಿದೆ.‌ ರೌಡಿ ಶೀಟರ್ ವೆಂಕಟರಾಜು@ತುಕಡಿಯ ಕಾಲಿಗೆ ಜಿಗಣಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಜಿಗಣಿ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಅವರು ರೌಡಿ ಶೀಟರ್ ತುಕಡಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.

ಇಂದು ಸಂಜೆ ರಾಗಿಹಳ್ಳಿ ಬಳಿ ಬಂಧನಕ್ಕೆ ತೆರಳಿದ್ದ ಜಿಗಣಿ ‌ಪೊಲೀಸ್ ಸಿಬ್ಬಂದಿ ಮೇಲೆ ರೌಡಿ ಶೀಟರ್ ವೆಂಕಟರಾಜು@ತುಕಡಿ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುಂತೆ ವಾರ್ನಿಂಗ್ ಮಾಡಲಾಗಿತ್ತು, ಆದರೆ ಪೊಲೀಸರ ಮಾತು ಕೇಳದೆ ಇದ್ದಾಗ ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಈ ರೌಡಿ ಶೀಟರ್ ಶೆಟ್ಟಿಹಳ್ಳಿ ಬಳಿ ಕೊಲೆ ಯತ್ನ ನಡೆಸಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ಈ ರೌಡಿ ಶೀಟರ್.

ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದನು. ಇಂದು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!