
ಸಿಡಿಲು ಬಡಿದು 16 ಕುರಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಅಕ್ಕಲೇಮಲ್ಲೇನಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಬಳಿಯ ರತ್ನಗಿರಿ ನಿವಾಸಿ ಕಿಟ್ಟಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಮರದ ಕೆಳಗಿ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಕುರಿಗಳ ಮಾರಣಹೋಮ ನಡೆದಿದೆ.
ರತ್ನಗಿರಿಯಿಂದ 180 ಕುರಿಗಳೊಂದಿಗೆ ಕುರಿಗಳನ್ನು ಮೇಯಿಸಲು ಅಕ್ಕಲೇಮಲ್ಲೇನಹಳ್ಳಿಗೆ ಕುರಿಗಾಹಿಗಳು ಬಂದಿದ್ದರು.
ಸ್ವಲ್ಪ ಎಚ್ಚರ ತಪ್ಪಿದ್ದರೆ ಕುರಿಗಾಹಿಗಳು ಸಹ ಸಿಡಿಲಿಗೆ ಬಲಿಯಾಗುತ್ತಿದ್ದರು. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿಗಳು ಕಂಗಾಲಾಗಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.