ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗ. ಇದರ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲಾಗಿದೆ.
ಕುರಿತು ಪ್ರತಿಕ್ರಿಯೆ ನೀಡಿದ ಎಂ.ಜಿ.ಶ್ರೀನಿವಾಸ್, ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿರುವ ಕೆಪಿಸಿಸಿ ಸದಸ್ಯ ಎಂ.ಜಿ ಶ್ರೀನಿವಾಸ್ ಪಕ್ಷದಿಂದ ಉಚ್ಚಾಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶುಭಕೃತ್ ಸಂವತ್ಸರದಲ್ಲಿ ಶುಭದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ನಿರ್ಧಾರ ಕಾಂಗ್ರೆಸ್ ಪಕ್ಷದ ಅಂತ್ಯಕ್ಕೆ ನಾಂದಿ ಹಾಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ಇದಕ್ಕೆ ತಕ್ಕ ಬೆಲೆ ತೆತ್ತಲ್ಲಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿರುವುದು ಇದೇ ನಿದರ್ಶನ ಸಾಕ್ಷಿಯಾಗಿದೆ ಎಂದು ಶಾಸಕ ವೆಂಕಟರಮಣಯ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.