ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಗ್ರಾಮಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನೆಡೆದಿದ್ದು. ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 30, ಬುಧವಾರದಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ ರವರನ್ನು ಅಧ್ಯಕ್ಷರಾಗಿ ಹಾಗೂ ಮಂಜುಳಮ್ಮ ರಾಜಕುಮಾರ್ ರವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಗಿರಿಜಾಂಬ ಎನ್ ಘೋಷಿಸಿದರು.
ನೂತನ ಅಧ್ಯಕ್ಷರಿಗೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯಣ್ಣ, ಕೆಪಿಸಿಸಿ ಸದಸ್ಯರಾದ ಮುನಿರಾಜು ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ, ಮುನಿಕೃಷ್ಣಪ್ಪ , ನಾಗೇಶ್, ಗಂಗಾಧರ. ಮಹಿಳಾ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ, ವರಲಕ್ಷ್ಮೀ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್, ಸುರೇಶ್ ಬಾಬು, ವೆಂಕಟೇಗೌಡ, ಮುಖಂಡರಾದ ಪುಟ್ಟಪ್ಪ, ಸುಬ್ರಹ್ಮಣ್ಯಪ್ಪ, ಉದಯ ಆರಾಧ್ಯ, ಪಿಡಿಒ ವೆಂಕಟೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.