ಕ್ಯಾಂಟರ್ ಮತ್ತು ದ್ವಿಚಕ್ರ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಇಂದು ಸಂಜೆ ನಡೆದಿದೆ.
ಮೃತ ದುರ್ದೈವಿಯನ್ನು ತಾಲೂಕಿನ ರಾಜಘಟ್ಟ ಗ್ರಾಮದ ಸೃಜನ್ ಎಂದು ಗುರುತಿಸಲಾಗಿದೆ.
ಡಿಯೋ ಬೈಕಿನಲ್ಲಿ ತುಮಕೂರು ಕಡೆಯಿಂದ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾಯಚೂರು ಮೂಲದ ರಮೇಶ್ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.