ಶ್ರೀಕ್ಷೇತ್ರ ಘಾಟಿ ಸುಬಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆಯ ಹಣವನ್ನು ಎಣಿಕೆ ಮಾಡಲಾಗಿದ್ದು, ರೂ.75.30.68 ಲಕ್ಷ ಸಂಗ್ರಹವಾಗಿದೆ.
ಇದರೊಟ್ಟಿಗೆ 76,500 ರೂ. ಮೌಲ್ಯದ 2 ಕೆಜಿ 250 ಗ್ರಾಂ ಬೆಳ್ಳಿ, 18,900 ರೂ. ಮೌಲ್ಯದ 3 ಗ್ರಾಂ 600 ಮಿಲಿ ತೂಕದ ಚಿನ್ನ ಹಾಕುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆಜೆ ಹೇಮಾವತಿ, ಪ್ರಧಾನ ಅರ್ಚಕ ಸುಬ್ರಮಣ್ಯ, ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು.