
ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ನಿಜಾಮುದ್ದೀನ್(38) ಎಂಬಾತ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಮ್ಮರಸನಹಳ್ಳಿಯಲ್ಲಿ ಘಟನೆ ನಡೆದಿದೆ. ತಮ್ಮರಸನಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ.

ನಿಜಾಮುದ್ದೀನ್ ಮತ್ತು ರಾಬೀಯ ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿಜಾಮುದ್ದೀನ್ಗೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಮೂಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೃತರನ್ನು ಮೂಲತಃ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳು ಎಂದು ಗುರುತಿಸಿದ್ದು. ಕೊಲೆ ಆರೋಪಿ ವಿರುದ್ದ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.