ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ  ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಗುಂಡಮಗೆರೆ ಸಮೀಪದಲ್ಲಿ ನಡೆದಿದೆ.

ಮೃತ ಯುವಕನನ್ನು ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯ ಚೈತನ್ಯ ನಗರ ನಿವಾಸಿ ಪುನಿತ್ ಕುಮಾರ್ ಡಿ.ಎಸ್ (27) ಎಂದು ಗುರುತಿಸಲಾಗಿದೆ.

ಮೃತನು ದ್ವಿಚಕ್ರ ವಾಹನದಲ್ಲಿ ಬಂಕೇನಹಳ್ಳಿ ಕಡೆಯಿಂದ ಬರುವ ವೇಳೆ ವಾಬಸಂದ್ರ-ಗುಂಡಮಗೆರೆ ನಡುವಿನ ತಿರುವಿನಲ್ಲಿ ಎದುರು ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ ಎಂದು ಪೊಲೀಸರು ಮೂಲಗಳಿಂದ ತಿಳಿದುಬಂದಿದೆ.

ಎದುರು ಬಂದ ಬೈಕ್ ನ್ನು ಪಾರು‌ ಮಾಡಲು ಹೋದ ಕೆಎಸ್‌ಆರ್‌ಟಿಸಿ ಬಸ್, ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ.

ಸ್ಥಳಕ್ಕೆ ಹೊಸಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!