ಹೊಂಗೆ ಮರಕ್ಕೆ ನೇಣು ಹಾಕಿಕೊಂಡು 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಸಮೀಪದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಬಾಲಕ ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ- ಸುಬ್ಬರಾಯಪ್ಪ ದಂಪತಿ ಪುತ್ರ ರವಿಕುಮಾರ(15) ಎಂದು ಗುರುತಿಸಲಾಗಿದೆ.
ಸದ್ಯ ಆತ್ಮಹತ್ಯೆಗೆ ಕಾರಣ ಏನೆಂಬುದು ಎಂದು ಇನ್ನೂ ತಿಳಿದು ಬಂದಿರುವುದಿಲ್ಲ,
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.