ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಹಳ್ಳಿ ಮೂಲಕ ಹಾದು ಹೋಗಿರುವ ಯಲಹಂಕ-ಹಿಂದೂಪುರ ಹೆದ್ದಾರಿಯಲ್ಲಿ ಬೈಕ್ ಸವಾರನಿಗೆ ಅಪಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ….
ಮೃತ ವ್ಯಕ್ತಿಯನ್ನು ಗೌರಿಬಿದನೂರು ಮೂಲದ ಹಣ್ಣಿನ ವ್ಯಾಪಾರಿ ಎಂದು ಮೇಲ್ಮೋಟಕ್ಕೆ ತಿಳಿದುಬಂದಿದೆ….
ಮೃತ ವ್ಯಕ್ತಿಯ ಹೆಸರು, ಖಚಿತ ವಿಳಾಸ, ವಯಸ್ಸು ತಿಳಿದುಬಂದಿರುವುದಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….