ಗುಡಿಬಂಡೆ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44ರ ತಟ್ಟಹಳ್ಳಿ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಯರ್ರಲಕ್ಕೇನಹಳ್ಳಿ ಗ್ರಾಮದ ಶಿವಪ್ಪ (35) ಹಾಗೂ ಅನಿಲ್ ಕುಮಾರ್(26) ಮೃತಪಟ್ಟಿರುತ್ತಾರೆ.
ಟಮೋಟ ಗಿಡಗಳಿಗೆ ಔಷಧಿ ತರಲು ತಮ್ಮ ಗ್ರಾಮದಿಂದ ಬೈಕ್ ನಲ್ಲಿ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ಬೈಕ್ ನ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬರು ರಸ್ತೆ ಪಕ್ಕದಲ್ಲಿ ಬಿದ್ದರೆ, ಮತ್ತೊಬ್ಬರು ಸುಮಾರು 100ಮೀ ದೂರದಲ್ಲಿ ಬಿದ್ದಿದ್ದಾರೆ, ಇಬ್ಬರು ಬೈಕ್ ಸವಾರರಿಗೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.
ಅಪಘಾತ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.