ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಗಲಗುರ್ಕಿ ಸಮೀಪ ರೆಸಾರ್ಟ್ ನಲ್ಲಿ ಯುವಕರ ಗುಂಪೊಂದು ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಭಾನುವಾರ (ಜೂ.08) ರಾತ್ರಿ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಅಸ್ಸಾಂ ಮೂಲದ 35 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ.
ಭಾನುವಾರ ಹ್ಯಾಪಿ ರೀಟ್ರೀಟ್ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿರುವ ಸ್ನೇಹಿತರು ಕುಡಿದ ಮತ್ತಿನಲ್ಲಿ ಮೋಹನ ಎಂಬಾತನ ಮೇಲೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಆತನ ಮರ್ಮಾಂಗಕ್ಕೆ ಒದ್ದು ತಲೆ ದೇಹದ ವಿವಿಧ ಭಾಗಗಳ ಮೇಲೆ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ…
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹಾಗೂ ನಂದಿ ಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಕೊಲೆ ಪ್ರಕರಣದ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ..
ಕೊಲೆಯಾದ ಮೋಹನ್ ರೆಸಾರ್ಟ್ ನಲ್ಲಿ ಸಪ್ಲೇಯರ್ ಆಗಿ ಕೆಲಸ ಮಾಡುತ್ತಿದ್ದ. ಆತನ ಸ್ನೇಹಿತರಿಂದಲೇ ಇದೀಗ ಕೊಲೆಯಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ರೆಸಾರ್ಟ್ ವ್ಯವಸ್ಥಾಪಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.