ಬೆಳ್ಳಂ‌ಬೆಳಗ್ಗೆ ಭೀಕರ ರಸ್ತೆ ಅಪಘಾತ: ಒಂದು ವರ್ಷದ ಮಗು ಸೇರಿ ನಾಲ್ವರ ದುರ್ಮರಣ

ಹೆದ್ದಾರಿಯಲ್ಲಿ‌ ಬೆಳ್ಳಂ‌ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥೀತಿ ಗಂಭೀರವಾಗಿದೆ.

ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4), ಒಂದು ವರ್ಷದ ಮಗು ಸಾವನ್ನಪ್ಪಿದ್ದಾರೆ.

ತಿರುಪತಿಯಿಂದ ಬೆಂಗಳೂರಿಗೆ ಬರ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಲಾಗಿದೆ.

ಡಿಕ್ಕಿ ರಭಸಕ್ಕೆ ಆಂಧ್ರ ಸಾರಿಗೆ ಬಸ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ.

ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *