
ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು ಕೂಡ ಇದೇ ವೇಳೆ ನಿಮ್ಮೆಲ್ಲರ ಗಮನಕ್ಕೆ ತರಬಯಸುತ್ತೇನೆ ಎಂದು ತಿಳಿಸಿದ್ದಾರೆ.