ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು;

• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.

• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ.134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.

• ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.

• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!