ಶ್ರೀ ಗಣೇಶ, ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ

ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ಲಿಂಗಮ್ಮಜ್ಜಿ ಅವರ ಜ್ಞಾಪಕಾರ್ಥವಾಗಿ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ದೇವರಾಜ ನಗರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯದಯ ಶಾಲಿವಾಹನ ಶಕ ವರ್ಷಂಗಳು 1947ಕ್ಕೆ ಸರಿಯಾದ ಶ್ರೀಮತ್ ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸ ಶುಕ್ಲಪಕ್ಷ ಅ. 25, 26, 27 ರಂದು ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ….

ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಉದ್ಘಾಟನೆ ಮಾಡಲಿದ್ದಾರೆ.

3 ದಿನದ ಜೀರ್ಣೋದ್ದಾರ ಮತ್ತು ಪೂಜಾ ಕಾರ್ಯಕ್ರಮಕ್ಕೆ ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ (ರಿ.) ರವರು ಸರ್ವರಿಗೂ ಆದರದ ಸುಸ್ವಾಗತ ಕೋರಿದ್ದಾರೆ….

Leave a Reply

Your email address will not be published. Required fields are marked *

error: Content is protected !!