
ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಡ್ಯಾನ್ಸರ್ ಸುಧೀಂದ್ರ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ.
ನಿನ್ನೆಯಷ್ಟೇ ಮಾರುತಿ ಸುಜುಕಿ ಕಂಪನಿಯ ಎಕೋ ಹೊಸ ಕಾರನ್ನು ಡೆಲಿವರಿ ಪಡೆಯಲಾಗಿತ್ತು, ಆದರೆ, ರಸ್ತೆ ಮಧ್ಯೆ ಕಾರು ಕೆಟ್ಟು ನಿಂತ್ತಿದ್ದರಿಂದ ಪರೀಕ್ಷಿಸಲು ಆಚೆ ಬಂದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಡ್ಯಾನ್ಸರ್ ಸಾವನ್ನಪ್ಪಿದ್ದಾನೆ. ಮೃತ ಸುಧೀಂದ್ರ ಜೀ ಕನ್ನಡದ ಸೈ ಡ್ಯಾನ್ಸ್ ಶೋ ಸೇರಿದಂತೆ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದನು.
ಮಾರುತಿ ಕಂಪನಿಯ ಕಳಪೆ ಗುಣಮಟ್ಟವೇ ಸಾವಿಗೆ ಕಾರಣ ಎಂದು ಸಾರ್ವಜನಿಕರ ಆರೋಪ ಮಾಡುತ್ತಿದ್ದಾರೆ.
ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.