
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿದ್ದು. ಮೂವರ ಪರಿಸ್ಥಿತಿ ಗಂಭೀರವಾಗಿದೆ.
ಬಾಗೇಪಲ್ಲಿಯ ದೇವರೆಡ್ಡಿಪಲ್ಲಿ ಗ್ರಾಮದ ಒಂದೇ ಕುಟುಂಬದ ಮದ್ದರೆಡ್ಡಿ, ಭಾಗ್ಯಮ್ಮ, ಮಣಿ, ಸುಬ್ರಮಣಿ, ಈಶ್ವರಮ್ಮ, ಮದ್ದಕ್ಕ, ಮಂಜುನಾಥ್, ಭಾನು ಅಸ್ವಸ್ಥಗೊಂಡಿದ್ದು, ಅಸ್ವಸ್ಥರನ್ನು ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳ ನಡುವೆ ದ್ವೇಷವಿತ್ತು. ಆದ್ದರಿಂದ ಸಾಂಬಾರ್ಗೆ ವಿಷ ಹಾಕಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.