
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ ಹಾಗು ಸುಬ್ರಂಹ್ಮಣ್ಯ ಸ್ವಾಮಿಗೆ ಬೆಣ್ಣೆ ಅಲಂಕಾರ ಹಾಗು ಸ್ವಾಮಿಯವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಮಾಡಿ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ನಂತರ ಸಂಜೆ ಲಕ್ಷ ದೀಪೋತ್ಸವ ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ನೂರಾರು ಮಹಿಳೆಯರು ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು