ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: 3ನೇ ವಾರ್ಡ್ ಓಬದೇನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನು ಆರ್ ವಿ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 19ವಾರ್ಡ್ ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ನಾಮ ಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು.

ಇಂದು (ಡಿ.9) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿತ್ತು. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.

ಇಂದು (ಡಿ.9) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಎಲ್ಲಾ ಪಕ್ಷ ಹಾಗೂ ಪಕ್ಷೇತರರು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.. 3ನೇ ವಾರ್ಡ್ ಓಬದೇನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನು ಆರ್ ವಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ಅರ್ ವಿ ಮನು ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಓಬದೇನಹಳ್ಳಿ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದರು.

ಓಬದೇನಹಳ್ಳಿ ವಾರ್ಡ್ ಗೆ ಮೂಲಭೂತ ಸೌಕರ್ಯಗಳು ಒದಗಿಸುವುದು, ಜನರಿಗೆ ಉದ್ಯೋಗ‌‌ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದರು….

ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಶಾಸಕ ಟಿ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಟಿ.ರಾಮಕೃಷ್ಣಯ್ಯ(ರಾಮಣ್ಣ), ಹಿರಿಯ ಕಾಂಗ್ರೆಸ್ ಮುಖಂಡರು, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್ ವಿ ಮಹೇಶ್ ಕುಮಾರ್, ಆರ್ ವಿ ಶಿವಕುಮಾರ್, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು…

Leave a Reply

Your email address will not be published. Required fields are marked *

error: Content is protected !!