
ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಭಾನುವಾರ(ನಾಳೆ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಸೋಮವಾರ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭಾನುವಾರ ಸಂಜೆ 4 ಗಂಟೆಗೆ ನಡೆಯಲಿರುವ ಅಧಿಕ ಹಾಲು ಕರೆಯುವ ಸ್ಪರ್ಧೆ ಕಾರ್ಯಕ್ರಮ ಉದ್ಘಾಟನೆಗೆ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಆಗಮಿಸುತ್ತಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ಎಂಎಲ್ಸಿ ಎಸ್ ರವಿ, ಬಮುಲ್ ಉಪಾಧ್ಯಕ್ಷ ರಾಜಣ್ಣ, ಮಾಜಿ ಶಾಸಕ ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಭಾಗಿಯಾಗಲಿದ್ದಾರೆ. ಅಧ್ಯಕ್ಷತೆಯನ್ನ ಕೊನಘಟ್ಟ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ವಹಿಸಲಿದ್ದಾರೆ ಎಂದು ಬಮುಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕು. ಮಿಶ್ರತಳಿ ಕರುಗಳ ಪ್ರದರ್ಶನಕ್ಕೆ ತಮ್ಮ ಕರುಗಳನ್ನ ಕರೆದುಕೊಂಡು ಬನ್ನಿ ಎಲ್ಲಾ ರೈತರಿಗೆ ಬಿ.ಸಿ ಆನಂದ್ ಕುಮಾರ್ ಮನವಿ ಮಾಡಿದ್ದಾರೆ.