
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್ ಆಗಿರುವ ಘಟನೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ನಗರದ ಮುತ್ಯಾಲಮ್ಮ ದೇವಾಲಯದ ಹಿಂಭಾಗದಲ್ಲಿನ ಮುಕ್ತಾಂಬಿಕಾ ಬಡವಾಣೆಯಲ್ಲಿ ನಡೆದಿದೆ.
ಇಂದು ಶಿವರಾತ್ರಿಯ ಕಾರಣ, ಗಿರಿಜಮ್ಮ ಎನ್ನುವವರು ಮನೆಯ ಮುಂದೆ ರಂಗೋಲಿ ಬಿಡಿಸುವ ವೇಳೆ ಈ ಘಟನೆ ನಡೆದಿದೆ. ಕಳ್ಳರು ಓಡಾಡುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಳಾಸ ಕೇಳುವ ನೆಪದಲ್ಲಿ ಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಗಿರಿಜಮ್ಮ ಅವರ ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಕಳ್ಳರು ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು, ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…