
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ದೇವನಹಳ್ಳಿ ಟೌನಿನ ಗುರುಭವನದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾರತ ಸೇವಾದಳ ರಾಜ್ಯ ಉಪಾಧ್ಯಕ್ಷರಾದ ಎಸ್ ರವಿಕುಮಾರ್, ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಜಿ. ಲಕ್ಷ್ಮಿಪತಿ, ದೇವನಹಳ್ಳಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಗೌಡ, ಜಿಲ್ಲಾ ಕಾರ್ಯದರ್ಶಿ ಪುಟ್ಟಸ್ವಾಮಿ, ಜಿಲ್ಲಾ ಸಮಿತಿ ಸದಸ್ಯರುಗಳಾದ ವೆಂಕಟಚಲ, ಸಾವಿತ್ರಮ್ಮ, ಬೊಮ್ಮಕ್ಕ, ದೇವನಹಳ್ಳಿ ತಾಲೂಕು ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸಂಘಗಳ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ತಾಲೂಕಿನ ಕ್ಷೇತ್ರಕ್ಷಣಾಧಿಕಾರಿಗಳು, ಶಿಕ್ಷಕಿಯರು ಭಾಗವಹಿಸಿದ್ದರು.