ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಪಡೆದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ ಶ್ಲಾಘಿಸಿದರು.

ಇಂದು ಬೆಸೆಂಟ್ ಪಾರ್ಕ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೂಕಂಪನ, ಭೂಕುಸಿತ, ಪ್ರವಾಹ, ಸುನಾಮಿ, ಬರಗಾಲ, ಅಗ್ನಿ ಆಕಸ್ಮಿಕ ಸಂದರ್ಭದಲ್ಲಿ ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ಕಾಡ್ಗಿಚ್ಚು ನಂದಿಸುವಿಕೆ, ಸಮುದಾಯ ಆಧಾರಿತ ಆರೋಗ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯಾಘಾತ ಸಂಭವಿಸಿದಾಗ ಸಿಪಿಆರ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ತಿಳಿಸಿದರು.

ವಿಪತ್ತು ಯಾವ ಸಂದರ್ಭದಲ್ಲಿ ಹೇಗೆ ಸಂಭವಿಸುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಕಸ್ಮಾತ್ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೇಗೆ ಧೈರ್ಯದಿಂದ ನಿರ್ವಹಿಸಬೇಕು ಎಂಬುದನ್ನು ಎಲ್ಲ ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು.

ವಿಪತ್ತು ಸಂಭವಿಸದರೆ ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡಬೇಕು ಸುರಕ್ಷಿತವಾದ ಸ್ಥಳಕ್ಕೆ ಅವರನ್ನು ಹೇಗೆ ಸಾಗಿಸಬೇಕು ಎಂಬುದರ ಕುರಿತು ವಿಪತ್ತು ಸನ್ನದ್ಧತೆ ತರಬೇತಿ ನೀಡಲಾಗಿದೆ ಎಂದರು…

ವಿಪತ್ತು ನಿರ್ವಹಣೆ ಕುರಿತು ಒಂದು ವಾರ ನಡೆದ ತರಬೇತಿ‌ಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…

ತರಬೇತಿಯಲ್ಲಿ ಉತ್ತಮ ನಡತೆಯಿಂದ ನಡೆದುಕೊಂಡ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು…

ಈ ವೇಳೆ ಮೈ ಭರತ್ ರಾಜ್ಯ ಸಂಚಾಲಕ ಅಶೋಕ್ ಕುಮಾರ್ ದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯಕ್ರಮ ಸಹಾಯಕಿ ಲತಾ ಬಿ ವಿ, ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ, ನನ್ನ ಭಾರತ ಸಂಯೋಜಕಿ ಜೆಮೈಮಾ ಜೇಸು ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!