ಹವಾಮಾನ ವೈಪರಿತ್ಯ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಚಾ ಸೈಕ್ಲೋನ್ ನಂತರ ಬಿಪರ್‌ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ಬಿಪರ್‌ಜಾಯ್ ಎಫೆಕ್ಟ್ ನಾಳೆಯಿಂದ ಜೂನ್ 10ರವರೆಗೆ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಮೂರು ದಿನ ಜೋರು ಮಳೆಯಾಗುವ ಸಾಧ್ಯತೆ‌ ಇದೆ.

ಈ ಸೈಕ್ಲೋನ್‌ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದೆ ಎನ್ನಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆ ಎಚ್ಚರಿಕೆ ಸಹ ಇದೆ.

4 ದಿನ ಮೀನುಗಾರಾರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿರುವ ಸಂಬಂಧಿಸಿದ ಇಲಾಖೆ. ಚಂಡಮಾರುತ ಹಿನ್ನೆಲೆ 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿರುವ ಮುಂಗಾರು.

ಚಂಡಮಾರುತ ಹಿ‌ನ್ನೆಲೆ, ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ, ಈ ಹಿಂದೆ ಜೂನ್ 3, 4ನೇ ತಾರೀಖು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ತಿಳಿಸಿದ್ದ ಹವಾಮಾನ ಇಲಾಖೆ, ಸದ್ಯ ಚಂಡಮಾರುತ ಹಿನ್ನೆಲೆ, ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ‌ ಇದೆ.

ಕರಾವಳಿ ಕರ್ನಾಟಕ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ

ಉತ್ತರ ಒಳನಾಡು
ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ

ದಕ್ಷಿಣ ಒಳನಾಡು
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ

Leave a Reply

Your email address will not be published. Required fields are marked *