
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ ಚೌಡೇಶ್ವರಿ ದೇವಾಲಯದಲ್ಲಿ ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ತೊಗಟವೀರ ಕ್ಷತ್ರಿಯ ಸಮಾಜದ ಪೀಠಾಧಿಪತಿ, ಕುಲ ಗುರು ಶ್ರೀ ಶ್ರೀ ಶ್ರೀ ದಿವ್ಯಜ್ಞಾನಾನಂದಗಿರಿ ಸ್ವಾಮಿಯ ದಿವ್ಯ ಸಾನಿಧ್ಯದಲ್ಲಿ ಮೇ.1ರ ಶುಕ್ರವಾರ ರಾತ್ರಿ 9 ಗಂಟೆಯಿಂದ ಮೇ.2ರ ಶನಿವಾರ ಬೆಳಗ್ಗೆ 9ರವರೆಗೆ ಜ್ಯೋತಿ ಮಹೋತ್ಸವ, ಬೆಳ್ಳಿ ಪಲ್ಲಕ್ಕಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ಜ್ಯೋತಿ, ಪಲ್ಲಕ್ಕಿ ಉತ್ಸವ ಪ್ರಯುಕ್ತ ಶ್ರೀ ಅಭಯ ಚೌಡೇಶ್ವರಿ ದೇವಿಗೆ ವಿಶೇಷ ಬೆಳ್ಳಿ ವಜ್ರಾಂಗಿ ಅಲಂಕಾರ, ಅಭಿಷೇಕ, ಗಂಗೆ ಪೂಜೆ, ಕಳಸಾ ಪೂಜೆ ಸೇರಿದಂತೆ ಇತರೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗಿತ್ತು. ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.