ಟಿಪ್ಪರ್ ಲಾರಿ ಬೈಕ್ ಸವಾರನ ಮೇಲೆ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಸಮೀಪದ ಗೋವರ್ಧನ್ ಫ್ಯಾಕ್ಟರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಬೈಕ್ ಸವಾರನ ಮೇಲೆ ಹರಿದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತರನ್ನು ದೇವನಹಳ್ಳಿ ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ (60) ಎಂದು ಗುರುತಿಸಲಾಗಿದೆ.

ಟಿಪ್ಪರ್ ಲಾರಿಯ ಚಕ್ರ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಗಂಭೀರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯ ಚಾಲನೆಯ ಕಾರಣದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ, ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!