
ಶಿವಮೊಗ್ಗ: ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ..
ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆದೇಶ ಮಾಡಿದ್ದಾರೆ.
2020ರ ಜನವರಿ 15ರಂದು ಪ್ರಕಾಶ್ ಬಾಬು ಎಂಬುವವರನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು. ಪ್ರಕಾಶ್ ಬಾಬು ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾಗಿದ್ದರು.
ಪ್ರಕಾಶ್ ಬಾಬು ಪತ್ನಿ ಫ್ಲೋರಾ ನ್ಯಾನ್ಸಿ ರಾಜಶೇಖರಯ್ಯನ ಜೊತೆ ಅನೈತಿಕ ಸಂಬಂಧ ಹೊಂದಿದ್ದರು.
ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಪ್ರಕಾಶ್ ಬಾಬುನನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು.
ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಈ ಬಗ್ಗೆ ಅಂದಿನ ಇನ್ಸ್ ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಗಲ್ಲು ಶಿಕ್ಷೆ ಜೊತೆಗೆ 14 ಲಕ್ಷ ದಂಡ ವಿಧಿಸಿದೆ. ಜೊತೆಗೆ ದೂರುದಾರರಿಗೆ 5 ಲಕ್ಷ ನೀಡುವಂತೆ ಆದೇಶಿಸಲಾಗಿದೆ.